Change View:     
ಓದುಗರ ಅಭಿಮತ
(ಸೋಮವಾರ 15 ಅಕ್ಟೋಬರ್ 2012)     
ಕೇಂದ್ರ ಕಾನೂನು ಸಚಿವ ಸಲ್ಮಾನ್ ಖುರ್ಷಿದ್ ಹಾಗೂ ಅವರ ಪತ್ನಿ ಲೂಯಿಸ್ ನಡೆಸುತ್ತಿರುವ ಡಾ.ಜಾಕೀರ್ ಹುಸೇನ್ ಮೆಮೋರಿಯಲ್ ಟ್ರಸ್ಟ್‌ನಲ್ಲಿ ಅವ್ಯವಹಾರ ನಡೆದಿದೆ ಎಂದು ಕೇಂದ್ರ ಲೆಕ್ಕ ಪರಿಶೋಧಕ ಸಮಿತಿ(ಸಿಎಜಿ) ಶನಿವಾರ ಸರ್ಕಾರಕ್ಕೆ ಸ್ಪಷ್ಟಪಡಿಸಿದೆ.
(ಮಂಗಳವಾರ 22 ನವೆಂಬರ್ 2011)     
ಮಡಿಕೇರಿ: ಕೊಡಗು ಪ್ರವಾಸಿಗರಿಗೆ ಸ್ವರ್ಗವಾಗುತ್ತಿದೆ. ವೀಕೆಂಡ್ ಹಾಗೂ ಸರ್ಕಾರಿ ರಜಾ ದಿನಗಳನ್ನು ಸವಿಯಲು ಇಲ್ಲಿಗೆ ಸಾವಿರಾರು ಮಂದಿ ಬರುತ್ತಾರೆ. ಸಾಮಾನ್ಯವಾಗಿ ಮಂಗಳೂರು ಹಾಗೂ ಮೈಸೂರಿಗೆ ಭೇಟಿ ನೀಡುವ ಪ್ರವಾಸಿಗರು ಇಲ್ಲಿಗೆ ಆಗಮಿಸದೆ ತೆರಳುವುದಿಲ್ಲ ಹೀಗಾಗಿ ದೇಶ ವಿದೇಶಗಳ ಪ್ರವಾಸಿಗರು ಕೊಡಗಿನಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಾರೆ.
(ಮಂಗಳವಾರ 1 ನವೆಂಬರ್ 2011)     
ಇವತ್ತು ಭಾರತ ಒಕ್ಕೂಟದಲ್ಲಿ ಕರ್ನಾಟಕ ರಾಜ್ಯ ಸ್ಥಾಪನೆಯಾದ ದಿನ. ಸರಿಯಾಗಿ 55 ವರ್ಷದ ಹಿಂದೆ ಇದೇ ದಿನದಂದು ಹಲವು ಪ್ರಾಂತ್ಯಗಳಲ್ಲಿ ಹರಿದು ಹಂಚಿ ಹೋಗಿದ್ದ ಕನ್ನಡ ಮಾತನಾಡುವ ಹಲವು ಭಾಗಗಳು ಆಲೂರು ವೆಂಕಟರಾಯರ ಮುಂದಾಳುತ್ವದಲ್ಲಿ ನಡೆದ ದಶಕಗಳ ಕಾಲದ ಹೋರಾಟದ ಫಲವಾಗಿ ಒಂದಾದ ಸುದಿನ. ಇಂತಹ ದಿನವೊಂದನ್ನು ನೆನೆಯಲು ನಮ್ಮ ರಾಜ್ಯ ಸರ್ಕಾರ ಎಲ್ಲ ಕನ್ನಡಿಗರಿಗೆ ಒಂದು ಭರ್ಜರಿ ಉಡುಗೊರೆ ಕೊಡುತ್ತಿದೆ. ಏನು ಗೊತ್ತೇ? ಮಕ್ಕಳ ಸಂಖ್ಯೆ ಕಡಿಮೆಯಿದೆ ಅನ್ನುವ ನೆಪವೊಡ್ಡಿ ಸರಿ ಸುಮಾರು ಮೂರು ಸಾವಿರ ಶಾಲೆಗಳನ್ನು ಮುಚ್ಚುವ ನಿರ್ಧಾರ! ಕನ್ನಡದ ಮಕ್ಕಳ ಏಳಿಗೆಗೆ ಬುನಾದಿ ಹಾಕಬೇಕಾದ ಶಾಲೆಗಳನ್ನು ಒಳ್ಳೆ ಅವೆನ್ಯೂ ರಸ್ತೆಯಲ್ಲಿ ಅಂಗಡಿ ಇಟ್ಟಿರೋ ವ್ಯಾಪಾರಿ ರೀತಿಯಲ್ಲಿ ಲಾಭ-ನಷ್ಟದ ಕಣ್ಣಿಂದ ಅಳೆದು ಮುಚ್ಚುವ ನಿಲುವಿಗೆ ಬಂದಿರುವ ಸರ್ಕಾರ "ಸರಿಯಾದ ಕಲಿಕೆ ರೂಪಿಸುವುದು" ನಾಡಿನ ಮಕ್ಕಳ ಬಗ್ಗೆ ತನಗಿರುವ ಕರ್ತವ್ಯದಂತೆ ಕಾಣದೇ ವ್ಯಾಪಾರವೆಂಬಂತೆ ಕಾಣುತ್ತಿರುವುದು ಬರಲಿರುವ ದಿನಗಳ ದಿಕ್ಸೂಚಿಯೇನೊ ಅನ್ನಿಸುವಂತಿದೆ.
(ಸೋಮವಾರ 31 ಅಕ್ಟೋಬರ್ 2011)     
ನಮ್ಮ ಕರ್ನಾಟಕದಲ್ಲಿ ಒಂದು ದುರಂತ ಸಂಭವಿಸುತ್ತಿದೆ. ಶಾಲೆಗಳ ಫಾಶಿ ಶಿಕ್ಷೆಗೆ ಸಿದ್ಧತೆ ನಡೆದಿದೆ. ವಿದ್ಯಾರ್ಥಿಗಳ ಸಂಖ್ಯೆ 5ಕ್ಕಿಂತ ಕಡಿಮೆ ಇರುವ 595 ಶಾಲೆಗಳು ಈಗಲೇ ಖತಂ. 6ರಿಂದ 10 ವಿದ್ಯಾರ್ಥಿಗಳಿರುವ 1500 ಶಾಲೆಗಳು ಮುಂದಿನ ವರ್ಷಾರಂಭಕ್ಕೆ ಕೊರಳೊಡ್ಡಿ ನಿಲ್ಲಬೇಕು. ಅವುಗಳಿಗೆ ಈಗಿಂದಲೇ ಮರಣ ಭೀತಿ. ಕ್ಷಣೇ ಕ್ಷಣೇ ದುರ್ಬಲಗೊಳ್ಳುತ್ತಾ ದಿನದೂಡಬಹುದು. ಸಾವಿನ ಸಮೀಪದ ಅನುಭವವೇ ಸಿಗದ ಕೋಮಾ ಸ್ಥಿತಿಗೆ ತಲುಪಿದ ರೋಗಿಯಂತಾಗಬಹುದು.
(ಮಂಗಳವಾರ 11 ಅಕ್ಟೋಬರ್ 2011)     
ಮಳೆಗಾಲ ಇನ್ನೇನು ಮುಗೀತು ಅನ್ನೋ ಹೊತ್ತಿಗಾಗಲೇ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ವಿದ್ಯುತ್ ಸಮಸ್ಯೆ ತಲೆದೋರಿದೆ. ದಿನವೊಂದಕ್ಕೆ 160 ಮಿಲಿಯನ್ ಯುನಿಟ್ ವಿದ್ಯುತ್ತಿಗೆ ಬೇಡಿಕೆ ಇದ್ದರೆ ಕೇವಲ 136 ಮಿಲಿಯನ್ ಯುನಿಟ್ ವಿದ್ಯುತ್ ಲಭ್ಯವಿದ್ದು, ಸುಮಾರು 24 ಮಿಲಿಯನ್ ಯುನಿಟ್ ವಿದ್ಯುತ್ತಿನ ಕೊರತೆ ಕರ್ನಾಟಕಕ್ಕೆ ಎದುರಾಗಿದೆ. ಕಲ್ಲಿದ್ದಲ್ಲಿನ ಕೊರತೆಯಿಂದಾಗಿ ಈ ಸಮಸ್ಯೆ ಎದುರಾಗಿದೆ ಅನ್ನುವುದು ಮಾಧ್ಯಮದಲ್ಲಿ ಕಂಡು ಬರುತ್ತಿರುವ ವರದಿಯಾಗಿದೆ. ಅದೇನೇ ಇದ್ದರೂ ಜನರ ಜೀವನಾಡಿಯಾದ ವಿದ್ಯುತ್ ಪೂರೈಕೆಯ ಈ ಸಮಸ್ಯೆಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನಿಭಾಯಿಸುತ್ತಿರುವ ರೀತಿ ನೋಡಿದರೆ ಸಮಸ್ಯೆ ಬಗೆಹರಿಸುವುದಕ್ಕಿಂತ ಪರಸ್ಪರ ದೋಷಾರೋಪ, ಕೆಸೆರೆರಚಾಟಕ್ಕೆ ಹೆಚ್ಚು ಗಮನ ಕೊಟ್ಟಂತಿದೆ!
Go to / 2 page(s) | ‹‹ Prev|Next ››